Monday, June 16, 2008

ಪದ್ಮಪ್ರಿಯಾ ಸಾವಿಗೊಂದು ಬೆನ್ನುಡಿ...


ಕೊಂಚ ಸಹನೆ, ಶಾಸಕರ ಮಾನದ ಬಗೆಗಿದ್ದ ಕಾಳಜಿಯ ಒಂದಷ್ಟಾದರೂ ಪದ್ಮಪ್ರಿಯಾಳ ಭಾವನೆಯ ಬಗ್ಗೂ ಇರುತ್ತಿದ್ದರೆ ಬಹುಶಃ ಅವಳು ಜೀವನಕ್ಕೆ ದುರಂತ ಅಂತ್ಯ ಕಾಣಿಸಿಕೊಳ್ಳಬೇಕಾಗಿರಲಿಲ್ಲ.
ಪದ್ಮಪ್ರಿಯಾ ಮತ್ತು ಅತುಲ್ ನಡುವಿನ ಪ್ರೇಮ ತೀರ ಗುಪ್ತವಾಗೇನೂ ಉಳಿದಿರಲಿಲ್ಲ. ಸ್ವತಃ ರಘುಪತಿ ಭಟ್ ಸೇರಿದಂತೆ ಎಲ್ಲರಿಗೂ ಗೊತ್ತಿತ್ತು. ಅಧಿಕೃತವಾಗಲ್ಲದಿದ್ದರೂ ಅನಧಿಕೃತವಾಗಿ, ಗಾಳಿಸುದ್ದಿಯಾಗಿ ಅದು ಉಡುಪಿ ಜನರ ಬಾಯಿ- ಕಿವಿಯಲ್ಲಿ ಸುಳಿದಾಡುತ್ತಿತ್ತು. ಇದರಿಂದಾಗಿಯೇ ಪದ್ಮಪ್ರಿಯಾ ನಾಪತ್ತೆಯಾದಾಗ ಉಡುಪಿ ಜನ ಕಣ್ಣು ತಿರುಗಿಸಿದ್ದು ಅತುಲ್ ಕಡೆಗೆ.
ಇಡೀ ಘಟನೆಯಲ್ಲಿ ಸ್ವತಃ ಪದ್ಮಪ್ರಿಯಾ, ಅತುಲ್, ಶಾಸಕರ ರಘುಪತಿ ಭಟ್ ಮತ್ತು ನಮ್ಮ ಸರಕಾರ ಹೀಗೆ ಎಲ್ಲರೂ ಕೊಂಚ ಎಡವಿದವರೇ. ಪದ್ಮಪ್ರಿಯಾ ಗೃಹಿಣಿ. ಆಕೆಯ ಸ್ವಂತ ಭಾವನೆಗಳಿಗೆ ಬೆಲೆ ಖಂಡಿತ ಇದೆ. ಅದನ್ನೇ ಆಕೆ ಇನ್ನಷ್ಟು ಸಹನೆಯಿಂದ, ವ್ಯವಸ್ಥಿತವಾಗಿ ಸಾಧಿಸಿಕೊಳ್ಳಹುದಿತ್ತು. ಮಕ್ಕಳ ಬಗ್ಗೆ ಕೊಂಚ ಯೋಚಿಸಬಹುದಿತ್ತು. ರಘುಪತಿ ಭಟ್ಟರಿಂದ ವಿಚ್ಛೇದನ ಪಡೆದು ತನಗೆ ಇಷ್ಟವಾದಂತೆ ಜೀವನ ನಡೆಸಹುದಿತ್ತು. ಇಲ್ಲವೇ ಹೇಗೂ ಇಬ್ಬರ ಸಂಬಂಧ ಹದಗೆಟ್ಟಿದ್ದೇ ಆದರೆ ಗಂಡನನ್ನು ಒಪ್ಪಿಸಿಯೇ ಇಷ್ಟಪಟ್ಟವರ ಜತೆ ಹೋಗಬಹುದಿತ್ತು. ಇದ್ಯಾವುದನ್ನೂ ಮಾಡದೆಯೂ ಹೋಗುವ ಕೊನೆಯ ಕ್ಷಣದಲ್ಲಿ ಒಂದು ಸಣ್ಣ ಚೀಟಿ ಬರೆದಿಟ್ಟು ಹೋಗಿದ್ದರೂ ಇಷ್ಟು ಗೊಂದಲ, ಕುತೂಹಲ ಸೃಷ್ಟಿಯಾಗುತ್ತಿರಲಿಲ್ಲ.
ಇನ್ನು ಅತುಲ್. ಅವರ ನಡುವಿನ ಸಂಬಂಧ, ಭಾವನೆಗಳು ಏನೇ ಇರಲಿ. ಆತನಿಗೂ ಜವಾದಾರಿಗಳಿವೆ. ಆತನೂ ಸಂಸಾರಸ್ಥ. ಆತ ಆಕೆಗೆ ತಿಳಿಹೇಳಬಹುದಿತ್ತು ಮತ್ತು ತಿಳಿಹೇಳಬೇಕಿತ್ತು. ಆತನೂ ಅದನ್ನು ಮಾಡಲಿಲ್ಲ. ಅಥವಾ ಆತ ಬುದ್ದಿ ಹೇಳಿದರೂ ಈಕೆ ಕೇಳಲಿಲ್ಲವೊ. ಇನ್ನು ಶಾಸಕ ಭಟ್ಟರ ಮನಸ್ಥಿತಿ ಅರ್ಥವಾಗದ್ದು. ಅವರಿಗೆ ಕೌಟುಂಬಿಕ ಸಂಬಂಧ ಹೇಗೇ ಇರಲಿ ಸಾರ್ವಜನಿಕರಿಗೆ ಅದು ಚೆನ್ನಾಗಿಯೇ ಕಾಣಬೇಕು. ಒಬ್ಬ ಶಾಸಕನಾಗಿ ಅದು ಅನಿವಾರ್ಯ. ಇದೇ ಕಾರಣಕ್ಕೆ ಅವರು ವಿಚ್ಛೇದನ ಬೇಡಿಕೆ ಮುಂದೂಡುತ್ತ ಬಂದಿದ್ದರು ಎಂಬುದು ಸುದ್ದಿ. ಒಬ್ಬ ರಾಜಕಾರಣಿಗೆ ಹೆಂಡತಿಕೊಡುವ ವಿಚ್ಛೇದನ ಸೋಲಿಗೂ ಕಾರಣವಾಗಿಬಿಡಹುದು. ಪತ್ನಿ ತಿರಸ್ಕರಿಸಿದಂತೆ ಜನವೂ ತಿರಸ್ಕರಿಬಿಟ್ಟರೆ? ಎಂಬ ಭಯ.
ಇನ್ನು ಸರಕಾರ. ಅದಕ್ಕೆ ಅದರ ಮರ್ಯಾದೆ, ಅದಕ್ಕಾಗುವ ಇರುಸುಮುರುಸುಗಳನ್ನು ತಪ್ಪಿಸಿಕೊಳ್ಳುವುದಷ್ಟೇ ಮುಖ್ಯ. ಅವರು ಶಾಸಕರೇ ಆಗಿರಲಿ, ಅವರ ಪತ್ನಿಯೇ ಆಗಿರಲಿ ಅದನ್ನೊಂದು ಪರಾರಿ ಪ್ರಕರಣವನ್ನಷ್ಟೇ ಆಗಿ ನೋಡುವುದು ಸರಕಾರದಿಂದಲೂ ಸಾಧ್ಯವಾಗಲಿಲ್ಲ. ಸಾಧ್ಯವಾಗುವುದೂ ಇಲ್ಲ. ಶಾಸಕರ ಪತ್ನಿ ಪರಾರಿಯನ್ನು ಸರಕಾರ ತನ್ನ ಪ್ರತಿಷ್ಠೆಯ ವಿಷಯ ಮಾಡಿಕೊಳ್ಳದೇ ಹೋಗಿದ್ದರೆ ಬಹುಶಃ ಸಮಸ್ಯೆ ನಿಧಾನವಾಗಿ ಬಗೆಹರಿಯುತ್ತಿತ್ತೇನೊ. ಅದೂ ಆಗಲಿಲ್ಲ. ಸರಕಾರ ಮತ್ತು ಅದರ ಸಕಲ ಅಂಗಗಳು ಶಾಸಕರ ಮಾನ ಕಾಪಾಡುವ ಮೂಲಕ ತಮ್ಮ ಮಾನವನ್ನೂ ಕಾಪಾಡಿಕೊಳ್ಳುವ ಆತುರದಲ್ಲಿದ್ದವು. ಹಾಗಿಲ್ಲದೇ ಹೋಗಿದ್ದಲ್ಲಿ ಕರ್ನಾಟಕ ಪೊಲೀಸರು ದಿಲ್ಲಿ ಪೊಲೀಸರ ಸಹಾಯ ಪಡೆದುಕೊಳ್ಳುತ್ತಿದ್ದರು. ಹಾಗೆ ಮಾಡಿದ್ದರೆ ಪದ್ಮಪ್ರಿಯಾ ಉಳಿಯುತ್ತಿದ್ದಳೇನೊ.
ಇದರಲ್ಲಿ ಮಾಧ್ಯಮಗಳ ಪಾಲು ತುಂಬ ಕಡಿಮೆ. ಆದರೂ ಸ್ವಲ್ಪ ಇದೆ. ಪದ್ಮಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕನ್ನಡದ ಸುದ್ದಿ ಚಾನಲ್ ಒಂದು ಚಾಲೂ ಆಗಿತ್ತು. ಆಕೆ ಅದನ್ನೇನಾದರೂ ನೋಡಿ ತಕ್ಷಣಕ್ಕೆ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಳೇ? ಎಂಬ ಅನುಮಾನವೂ ಇದೆ. ಯಾಕೆಂದರೆ ಚಾನಲ್‌ನವರು ಟಿಆರ್‌ಪಿ ಗಳಿಸುವ ಗಡಿಬಿಡಿಯಲ್ಲಿ ಸುದ್ದಿಯನ್ನು ಬ್ರೇಕ್ ಮಾಡುವ ಆತುರದಲ್ಲಿ ಬಾಯಿಗೆ ಬಂದಿದ್ದನ್ನೆಲ್ಲ ಒದರುತ್ತಲೇ ಇರುತ್ತಾರೆ. ಅದು ಆ ಪ್ರಕರಣಕ್ಕೆ ಸಂಬಂಧಿಸಿದವರ ಮೇಲೆ ಯಾವ ಪರಿಣಾಮ ಬೀರೀತು ಎಂಬುದು ಅವರಿಗೆ ಮನಸ್ಸಿನಲ್ಲಿ ಇರುವುದೇ ಇಲ್ಲ.ಈ ಎಲ್ಲ ಕಾರಣಗಳೂ ಸೇರಿ ಉಡುಪಿ ಶಾಸಕ ರಘುಪತಿ ಭಟ್ಟರ ಪತ್ನಿ ದಿಲ್ಲಿಯ ಮನೆಯೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವಂತಹ ಅನಿರೀಕ್ಷಿತ ಅಂತ್ಯ ಕಾಣುವಂತಾಯಿತು.
ಯಾವುದೇ ವಿಷಯವಿರಲಿ ಅದು ಅದರ ವ್ಯಾಪ್ತಿ ಮೀರಿ ಬೃಹತ್ತಾಗಿ ಬೆಳೆದಾಗ ಅನಾಹುತಗಳು ಸಂಭವಿಸುತ್ತವೆ. ಪದ್ಮಪ್ರಿಯಾ ವಿಷಯದಲ್ಲಿ ಆಗಿದ್ದೂ ಇದೇ.
ಪದ್ಮಪ್ರಿಯಾ ಸಾವು ಯಾಕೋ ಬೇಸರ ಉಂಟುಮಾಡಿದೆ. ಛೆ ಹೀಗಾಗಬಾರದಾಗಿತ್ತು ಅನಿಸುತ್ತಿದೆ. ಆದರೂ ಹಾಗಾಗಿ ಹೋಗಿದೆ. ನನಗೆ ಇಂತಹ ದುಃಖದಲ್ಲೂ ಒಂದು ಹಾಸ್ಯ ಕಾಣಿಸುತ್ತಿದೆ. ಅದೇನೆಂದರೆ ಭಾನುವಾರ ಬೆಳಗ್ಗೆ ಟಿವಿ ಚಾನಲ್ ಮತ್ತು ಪತ್ರಿಕೆಗಳಲ್ಲಿ ಪದ್ಮಪ್ರಿಯಾ ಕೋಲಾರದಲ್ಲಿ ಪತ್ತೆ. ಉಡುಪಿಗೆ ರವಾನೆ, ಮಂಗಳೂರಿನ ಬಿಜೆಪಿ ಮುಖಂಡರೊಬ್ಬರ ಮನೆಯಲ್ಲಿ ಮನವೊಲಿಕೆ ಮುಂತಾದ ಸುದ್ದಿಗಳನ್ನು ಪ್ರಕಟವಾಗಿದ್ದವು. ಪ್ರಕಟವಾಗುತ್ತಲೇ ಇದ್ದವು. ಆಕೆ ದಿಲ್ಲಿಯ ಮನೆಯೊಂದರಲ್ಲಿ ಕುಳಿತು ಇದನ್ನೆಲ್ಲ ನೋಡುತ್ತಿದ್ದಳು!
ಆಕೆಗೆ ಈ ಮಾಧ್ಯಮಗಳು ಅದೆಷ್ಟು ಸುದ್ದಿ ಬಿತ್ತರಿಸುತ್ತವೆ ಅನ್ನಿಸಿರಬೇಕಲ್ಲ. ಹೀಗೆ ಅನ್ನಿಸಿಯೂ ಅದೇ ಮಾಧ್ಯಮ ಬಿತ್ತರಿಸಿದ ಸುದ್ದಿ ನಂಬಿ ಆತ್ಮಹತ್ಯೆಗೆ ಮನಸ್ಸು ಮಾಡಿರಬಹುದಾ? ಅನುಮಾನ. ಆದರೂ ಸಾಯುವ ಮುಂಚೆ ಮಾಧ್ಯಮಗಳಲ್ಲಿ ಪ್ರಕಟವಾದ ಪದ್ಮಪ್ರಿಯಾ ಕೋಲಾರದಲ್ಲಿ ಪತ್ತೆ ಸುದ್ದಿ ನೋಡಿ ಆಕೆ ನಕ್ಕಿರಬಹುದಲ್ಲಾ...

7 comments:

ಅಮರ said...

ಹೋ!!! ಈ ವಿಚಾರದ ಬಗ್ಗೆ ನನ್ಗೆ ತಿಳಿದಿರಲಿಲ್ಲ.... ನಾನು ಓದಿದ ಪತ್ರಿಕೆಯಲ್ಲಿ ಇದರ್ ಪ್ರಸ್ಥಾಪವಿರಲಿಲ್ಲ... ನೀವು ಬರೆದದ್ದು ಒಳ್ಳೆದಾಯಿತು.

ರಾಜೇಶ್ ನಾಯ್ಕ said...

ವಿನಾಯಕ,
ಬೆನ್ನುಡಿ ಚೆನ್ನಾಗಿದೆ. ಚಿತ್ರ ಎಲ್ಲಿ ಸಿಕ್ಕಿತು? ಲೇಖನಕ್ಕೆ ಸರಿಯಾಗಿ ಮ್ಯಾಚ್ ಆಗುತ್ತೆ ಆ ಚಿತ್ರ!

Anonymous said...

too bad

Shanmukharaja M said...

"ಆದರೂ ಸಾಯುವ ಮುಂಚೆ ಮಾಧ್ಯಮಗಳಲ್ಲಿ ಪ್ರಕಟವಾದ ಪದ್ಮಪ್ರಿಯಾ ಕೋಲಾರದಲ್ಲಿ ಪತ್ತೆ ಸುದ್ದಿ ನೋಡಿ ಆಕೆ ನಕ್ಕಿರಬಹುದಲ್ಲಾ..."
ಇದು ನಿಜವಾಗಿಯೂ ವಕ್ರನೋಟ!

Unknown said...

if it is anything; it is true that the VIPs do not have Privacy. If they make any small mistake that will be a headline for all Media.

Unknown said...

It is good that she died. What other kind of death she deserved?. Being a responsible mother, and this fellow Athul!!!, All are the outcome of an extramarital relationship.
While our constitution has given all the rights to choose their life paths, why the hell did she run away with that ba****d?.
In our country there are many many example of politicians getting divorced still winning elections.

My only sorrow is- this veshyaputhra still survived and no case against him!.
Here is a message to the society - ANYBODY CAN RUNAWAY WITH ANYBODY AND IT IS ABSOLUTELY OK!.

Anonymous said...

It is good to note that somewhere Male politicians get a warning signal. They think it is their birthright to be immoral. Have heard enough stories of men-politicans enjoying around with fun-femail and frolic. Now let them sit back and watch their wives!!!