Friday, August 01, 2008

ರೈ ಹೇಳಿದ ಚೇಳಿನ ಕಥೆ


ಅವರಾಗ ರಾಜ್ಯದ ಸಾರಿಗೆ ಸಚಿವರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ದಿನಕ್ಕೆ ನಾಲ್ಕೈದು ಕಾರ್ಯಕ್ರಮದಲ್ಲಿ ಭಾಗವಹಿಸದಿದ್ರೆ ಅವರಿಗೆ ನಿದ್ರೆ ಬರಲ್ಲ. ಅವ್ರೇರೀ... ರಮಾನಾಥ ರೈ.

ರೈ ಸಚಿವರಾಗಿದ್ದಾಗ ಸದಾ ಕಾರ್ಯಕ್ರಮದಲ್ಲಿ ಭಾಗವಹಿಸುವುದೇ ಒಂದು ದೊಡ್ಡ ಕೆಲಸ. ಎಲ್ಲ ಕಾರ್ಯಕ್ರಮಕ್ಕೂ ವಿಳಂಬವಾಗಿ ಬರೋದು ಮಾಮೂಲು. ಒಮ್ಮೆ ಬಂಟ್ವಾಳದ ಶಾಲಾ ವಾಷಿಱಕೋತ್ಸವ ಕಾರ್ಯಕ್ರಮಕ್ಕೆ ಮಧ್ಯರಾತ್ರಿ ೧೨.೦೦ ಗಂಟೆಗೆ ಹೋಗಿದ್ದರು. ಅದಕ್ಕೆ ರೈ ಅವರನ್ನು ಯಾವ ಕಾರ್ಯಕ್ರಮಕ್ಕೆ ಕರೆದರೂ ಮದುವೆಗೆ ಮಾತ್ರ ಕರೆಯಬಾರದು ಎಂದು ಅಲ್ಲಿನ ಜನ ಹೇಳುತ್ತಿದ್ದರು. ಯಾಕೆಂದರೆ ಅವರು ಮದುವೆಗೆ ಕರೆದರೆ ಫಸ್ಟ್ ನೈಟಿನ ಹೊತ್ತಿಗೆ ಬರುತ್ತಾರೆಂಬ ಭಯ!

ರೈ ಅವರು ಲೆಕ್ಕತಪ್ಪುವಷ್ಟು, ಸುಸ್ತಾಗುವಷ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿದರೂ ಎಂದೂ ಯದ್ವಾತದ್ವಾ ಮಾತನಾಡಿದವರಲ್ಲ. ಯಾರನ್ನೂ ಬೈದವರಲ್ಲ. ಕಥೆ ಹೇಳಿದವರೇ ಅಲ್ಲ. ಅಂತಹ ಸಚಿವರು ಮಂಗಳೂರಿನ ತಿರುವೈಲಿನಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ಸಂದರ್ಭ ಭಾಷಣ ಮಾಡುವಾಗ ಚೇಳಿನ ಕಥೆ ಹೇಳಿದ್ದರು.

ಒಬ್ಬ ತೊರೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಆಗ ಒಂದು ಚೇಳು ನೀರಲ್ಲಿ ಬಿದ್ದಿರುವುದು ಕಂಡಿತು. ಅದು ಮೇಲೆ ಬರಲು ಯತ್ನಿಸಿ, ಯತ್ನಿಸಿ ವಿಫಲವಾಗುತ್ತಿತ್ತು. ಅದನ್ನು ನೋಡಿದ ಆತ ಚೇಳನ್ನು ಹಿಡಿದು ಮೇಲೆ ಬಿಡಲು ನಿರ್ಧರಿಸಿ ಅದನ್ನು ಹಿಡಿದ. ಆದರೆ ಚೇಳು ಅವನ ಕೈ ಕಡಿದಿದ್ದರಿಂದ ಆತ ಅದನ್ನು ಬಿಟ್ಟ. ಚೇಳು ಪುನಃ ನೀರಿಗೆ ಬಿತ್ತು. ಮತ್ತೆ ಚೇಳನ್ನು ನೀರಿನಿಂದ ಮೇಲೆತ್ತಲು ಹೋದ. ಅದು ಕಡಿಯಿತು. ಈತ ಬಿಟ್ಟ ಚೇಳು ನೀರಿಗೆ ಬಿತ್ತು!!

ಹೀಗೆ ಮಾಡುತ್ತಿರುವಾಗ ಇನ್ನೊಬ್ಬ ದಾರಿಹೋಕ ಆ ವಿಚಿತ್ರ ವ್ಯಕ್ತಿಯಲ್ಲಿ ಹೇಳಿದ: ಅಲ್ಲಯ್ಯ ಅದು ಕಡಿದರೂ ನೀನೇಕೆ ಅದನ್ನು ಮತ್ತೆ ಮತ್ತೆ ನೀರಿನಿಂದ ಮೇಲೆತ್ತಲು ಯತ್ನಿಸುವೆ. ನಿನಗೆ ಬೇರೆ ಕೆಲಸ ವಿಲ್ಲವೇ? ಅದಕ್ಕೆ ಆ ವ್ಯಕ್ತಿ ಅದು ನೀರಲ್ಲಿ ಬಿದ್ದು ಸಾಯುತ್ತಿದೆ. ಅದನ್ನು ಬದುಕಿಸುವುದು ನನ್ನ ಧರ್ಮ. ಆದರೆ ಕಡಿಯುವುದು ಅದರ ಗುಣ ಅಂದನಂತೆ.

ಈ ಕತೆ ಕೇಳಿದ ಮೇಲೆ ರೈ ಯಾಕೆ ಈ ಕಥೆ ಹೇಳಿರಬಹುದು ಎಂದು ಯೋಚಿಸಿದೆ. ಅವರು ಕಥೆ ಹೇಳಿದ್ದರ ಅರ್ಥ ಇಷ್ಟೆ. ತನ್ನ ವಿರೋಧಿಗಳು ಚೇಳಿದ್ದಂತೆ. ನೀರಲ್ಲಿ ಬಿದ್ದ (ಕಷ್ಟದಲ್ಲಿರುವ) ಅವರನ್ನು ಎಷ್ಟು ಸರಿ ನಾನು ಎತ್ತಲು ಹೋದರೂ ನನಗೇ ಕಡಿಯುತ್ತಾರೆ. ಕಡಿಯುವುದು ಅವರ ಗುಣ. ಆದರೆ ಅವರನ್ನು ಬದುಕಿಸುವುದು ನನ್ನ ಧರ್ಮ ಎಂದು ನಾನು ತಿಳಿದುಕೊಂಡಿದ್ದೇನೆ ಎಂಬುದು ಒಳ ಅರ್ಥ. ಇದನ್ನು ರೈ ಸುಚ್ಯವಾಗಿ ಚೇಳಿನ ಕಥೆ ಮೂಲಕ ಹೇಳಿದ್ದರು.

ತಿರುವೈಲು ಗ್ರಾಮವನ್ನು ಮಹಾನಗರ ಪಾಲಿಕೆಗೆ ಸೇರಿಸುವ ಸಂದರ್ಭ ಹಲವರು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಒಳ ರಾಜಕೀಯ ನಡೆಸಿದ್ದರು. ಇದು ರೈ ಸಿಟ್ಟಿಗೆ ಕಾರಣವಾಗಿತ್ತು. ಚೇಳಿನ ಕಥೆ ಮೂಲಕ ರೈ ವಿರೋಧಿಗಳನ್ನು ಕುಟುಕಿದರು.

6 comments:

Unknown said...

kathe shuru madidderi
chennagide rai purana

ವಿ.ರಾ.ಹೆ. said...

ಇದು ಪಂಚತಂತ್ರದಿಂದಲೋ ಅಥವಾ ಇನ್ಯಾವುದರಿಂದಲೋ ತೆಗೆದುಕೊಂಡ ಕಥೆ ! :)

ವಿಜಯ್ ಜೋಶಿ said...

Rajakaaranigalu kathe chennaagi hELuttaare. aadre kelsa maathra maadalla.

ಹರೀಶ್ ಕೇರ said...

OK.Chennagide.
namage innu Delhiya rajakaranigala kathe heli.
- Harish Kera

ಮಿಥುನ ಕೊಡೆತ್ತೂರು said...

papa rai! barli barli hosa hosa kate

ವಿನಾಯಕ ಭಟ್ಟ said...

ಥ್ಯಾಂಕ್ಯು ಫ್ರೆಂಡ್ಸ್. ಓದಿದ್ದಕ್ಕೆ, ಪ್ರತಿಕ್ರಿಯಿಸಿದ್ದಕ್ಕೆ. ಆದಷ್ಟು ಬೇಗ ದೆಹಲಿ ರಾಜಕಾರಣಿಗಳ ಕತೆಯೊಂದಿಗೆ ಹರೀಶ ಕೇರನ ಆಸೆಯನ್ನೂ ಈಡೇರಿಸಲಾಗುವುದು. ಮಿಥುನನ ಹೊಸ ಕತೆಯ ಆಸೆಯನ್ನೂ...